ಕೆ.ಎನ್.ಪಿ.ವಾರ್ತೆ,ಗಂಗಾವತಿ,ಆ.14;
ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಸಹಯೋಗದೊಂದಿಗೆ ಕನ್ನಡ ವಿಭಾಗ, ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಜಾಣ ಜಾಣೆಯರ ಬಳಗದಿಂದ ಕಾಲೇಜು ಸಭಾಂಗಣದಲ್ಲಿ ನಿನ್ನೆ “ನನ್ನ ನೆಚ್ಚಿನ ಪುಸ್ತಕ” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ, ವಿಶೇಷ ಉಪನ್ಯಾಸ ನೀಡಿದ ಕನ್ನಡ ವಿಶ್ವವಿದ್ಯಾಲಯ ಹಂಪಿ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಚೆಲುವರಾಜ, ಯುವಜನತೆಯು ಜ್ಞಾನವನ್ನು ಪುಸ್ತಕದಿಂದಲೇ ಪಡೆಯಬೇಕು. ಆಧುನಿಕ ತಂತ್ರಜ್ಞಾನ ನಶಿಸುತ್ತದೆ. ಅಕ್ಷರ ಎಂದೂ ಮಾಸದು.
ಪುಸ್ತಕದ ಸ್ಪರ್ಶ ಮನುಷ್ಯನ ದೇಹದ ಎಲ್ಲ ಅಂಗಗಳಿಗೆ ಚೈತನ್ಯ ನೀಡುತ್ತದೆ. ಆದರೆ ಮೊಬೈಲ್, ಕಂಪ್ಯೂಟರ್ ಗಳು ಇಂಧ್ರಯಾನುಭವ ನೀಡುವುದಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಜಾಣ ಜಾಣೆಯರ ಬಳಗದ ಸಂಯೋಜಕರಾದ ಡಾ.ಜಾಜಿ ದೇವೇಂದ್ರಪ್ಪ ಆಶಯನುಡಿಗಳನ್ನಾಡಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಹಸನ್ಮಿಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಕವಿಗಳಾದ ರಮೇಶ್ ಗಬ್ಬೂರು ಮತ್ತು ದಂತ ವೈದ್ಯರು, ಕವಿಗಳಾದ ಡಾ.ಶಿವಕುಮಾರ ಮಾಲಿಪಾಟೀಲ್, ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಜಗದೇವಿ ಕಲಶೆಟ್ಟಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮುಮ್ತಾಜ್ ಬೇಗಂ ಹಾಗೂ ನಿಂಗಪ್ಪ ಕಂಬಳಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗಂಗಾವತಿ ಶರಣ ಕಲಾಬಳಗದವರು ವಚನ ಮತ್ತು ಹೋರಾಟದ ಹಾಡುಗಳನ್ನು ಪ್ರಸ್ತುತ ಪಡಿಸಿದರು.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.